Friday 6 April 2012

ನಮಗೆ ಗೊತ್ತಿರುವುದು ದೂಷಿಸುವುದು ಮಾತ್ರ, ಚಿಂತಿಸುವುದಲ್ಲ!

ನಮಗೆ ಗೊತ್ತಿರುವುದು ದೂಷಿಸುವುದು ಮಾತ್ರ, ಚಿಂತಿಸುವುದಲ್ಲ!

ಇತ್ತೀಚೆಗೆ ಖಾಸಗಿ ಸುದ್ದಿವಾಹಿನಿಯೊಂದರ ವಿಶೇಷ ಕಾರ್ಯಕ್ರಮದಲ್ಲಿ ಭಾರತದ ಭದ್ರತೆಗೆ ಸಂಬಂಧಿಸಿ ಕಾರ್ಯಕ್ರಮ ನಡೆಯುತ್ತಿತ್ತು. ಇದರಲ್ಲಿ ಭಾರತದ ರಕ್ಷಣಾ ವಿಭಾಗವನ್ನು ಇತರೆ ದೇಶಗಳ ರಕ್ಷಣಾ ವಿಭಾಗಗಳಿಗೆ ಹೋಲಿಸಿ ಈ ವಾಹಿನಿ ಉತ್ತಮವಾಗಿಯೇ ಕಾರ್ಯಕ್ರಮ ನೀಡಿತ್ತು. ಆದರೆ ಮರುದಿನ ಫೇಸ್ಬುಕ್ನಲ್ಲಿ ಈ ವಾಹಿನಿಯ ವಿರುದ್ದವೇ ಕೆಲವರು ಕಿಡಿಕಾರಿದ್ದರು. ಇದನ್ನು ಗಮನಿಸಿದಾಗ ನನಗೆ ಒಂದಂತೂ ಸ್ಪಷ್ಟವಾಯಿತು. ವೈಫಲ್ಯಗಳನ್ನು ಬಿಚ್ಚಿಟ್ಟರೆ ಸಾಮಾನ್ಯ ನಾಗರಿಕನಿಗೂ ಕೋಪ ಬರುತ್ತದೆ ಎನ್ನುವುದು. ಈ ವಾಹಿನಿಯ ಕಾರ್ಯಕ್ರಮವನ್ನು ನಾನೂ ವೀಕ್ಷಿಸಿದ್ದೇನೆ. ಇಲ್ಲಿ ಪ್ರಸಾರಗೊಂಡಿರುವ ಇಂಚಿಂಚು ವಿಚಾರವು ನಮ್ಮ ದೇಶವನ್ನು ಬೆಚ್ಚಿ ಬೀಳಿಸುವಂಥದ್ದು. ಈ ಬಗ್ಗೆ ಫೇಸ್ಬುಕ್ನಂತಹ ಸಾಮಾಜಿಕ ತಾಣದಲ್ಲಿ ಜಾಗೃತಿ ಮೂಡಿಸುವ ಬದಲು ಕೆಲ ವಿಕೃತ ಮನಸ್ಕರು ಅಲ್ಲೂ ಮಾಧ್ಯಮದ ದೂಷಣೆಗಿಳಿದಿದ್ದಾರೆ. ಬಹುಶಃ ಇದರಿಂದಲೋ ಏನೋ ನಮ್ಮ ದೇಶದಲ್ಲಿ ರಾಜಕಾರಣಿಗಳ `ಕೈ ಮೇಲಾಗಿರುವುದು.
ಮಾಧ್ಯಮವೊಂದು ಎಚ್ಚರಿಸುವ ಕೆಲಸ ಮಾಡಿದಾಗ ಈ ಬಗ್ಗೆ ದೇಶದ ನಾಗರಿ ಕರಾಗಿ ನಾವು ಯೋಚಿಸಬೇಕು. ಪ್ರತೀ ವರ್ಷ ಕೋಟ್ಯಂತರ ರುಪಾಯಿ ದೇಶದ ರಕ್ಷಣೆಗೆಂದೇ ಎತ್ತಿಡುವ ಸಕರ್ಾರ ಈ ಹಣವನ್ನು ಏನು ಮಾಡುತ್ತಿದೆ ಎಂದು ಪ್ರಶ್ನಿಸುವ ಬದಲು ಮಾಧ್ಯಮದ ಕಾರ್ಯಕ್ರಮಗಳನ್ನೇ ನಾವಿಂದು ಪ್ರಶ್ನಿಸುತ್ತಿದ್ದೇವೆ. ಹಾಗಂತ ಮಾಧ್ಯಮಗಳು ತಪ್ಪು ಮಾಡುತ್ತಿಲ್ಲ ಎಂದು ನಾನು ಹೇಳುತ್ತಿಲ್ಲ. ಆದರೆ ಮೊನ್ನೆಯ ಕಾರ್ಯಕ್ರಮ ದೇಶದ ಜನತೆಯನ್ನು ಎಚ್ಚರಿಸುವ ದೃಷ್ಟಿಯಲ್ಲಿ ಉತ್ತಮ ಕಾರ್ಯಕ್ರಮವೆನ್ನಬಹುದು. ಒಂದೆರೆಡು ಕಡೆಗಳಲ್ಲಿ ವಾಹಿನಿ  ಸ್ವಲ್ಪ ಅತಿರೇಖ ಎನ್ನುವಂತಹ ಪದಗಳನ್ನು ಬಳಸಿದ್ದನ್ನು ಬಿಟ್ಟರೆ ಭಾರತಕ್ಕೆ ಅವಮಾನವಾಗುವಂತಹ ವಿಚಾರಗಳು ಅಲ್ಲಿರಲಿಲ್ಲ. ಅಲ್ಲದೇ ಕೆಲವರು ಈ ಬಗ್ಗೆ ಚಚರ್ಿಸುವ ಬದಲು ನಮ್ಮಿಂದ ಮಾಧ್ಯಮವನ್ನೇ `ಚಿತ್ರಾನ್ನ ಮಾಡಲು ಸಾಧ್ಯವಿದೆ ಎನ್ನುವ ಮಾತನ್ನು ಈ ತಾಣದಲ್ಲಿ ದಾಖಲಿಸಿದ್ದರು. ನಮಗೆ ದೇಶದಲ್ಲಿ ನಡೆಯುತ್ತಿರುವ ರಾಜಕೀಯ ಸಂಘರ್ಷವನ್ನೇ ನಿಲ್ಲಿಸಲು ಸಾಧ್ಯವಾಗಿಲ್ಲ ಎಂದ ಮೇಲೆ ಮುಂದೆ ವಿದೇಶಿಯರು ದಾಳಿ ನಡೆಸಿದರೆ ನಮ್ಮಿಂದ ತಡೆಯಲು ಸಾಧ್ಯವೇ? ಇತ್ತೀಚಿನ ದಿನಗಳಲ್ಲಿ ಮಾಧ್ಯಮ ಗಳ ಕೆಲ ಕಾರ್ಯಕ್ರಮಗಳು ಅತಿಯಾಗುತ್ತಿದೆ ಎನ್ನುವುದೇನೋ ಸತ್ಯ. ಆದರೆ ಎಲ್ಲವನ್ನೂ ಒಂದೇ ದೃಷ್ಟಿಕೋನದಲ್ಲಿ ನೋಡುವುದನ್ನು ಬಿಡಬೇಕಷ್ಟೇ. ಅಷ್ಟಕ್ಕೂ ಮೊನ್ನೆ ಸುದ್ದಿವಾಹಿನಿ ಪ್ರಸಾರ ಮಾಡಿದ ಕಾರ್ಯಕ್ರಮ ಅವರ ಖಾಸಗಿ ಮೂಲಗಳಿಂದ ಬಹಿರಂಗಗೊಂಡದ್ದಲ್ಲ. ಬದಲಾಗಿ ನಮ್ಮ ದೇಶದ ರಕ್ಷಣಾ ವ್ಯವಸ್ಥೆಯ ಮೂಲವೊಂದು ಬಿಚ್ಚಿಟ್ಟ ಸತ್ಯ! 
ಇಂದಿಗೂ ಚೀನ ನಮ್ಮ ದೇಶದ ಮೇಲೆ ಒಂದು ರೀತಿಯಲ್ಲಿ ಯುದ್ದ ನಡೆಸುತ್ತಿದೆ. ಚೀನಾದ ಎಲ್ಲಾ ವಸ್ತುಗಳು ಸದ್ದಿಲ್ಲದೆ ನಮ್ಮ ಕೈಗಳಲ್ಲಿ ರಾರಾಜಿಸುತ್ತಿದೆ. ವಿದೇಶಿಗರ ವಸ್ತುಗಳಿಗೆ ಗೊತ್ತಿದ್ದೋ ಗೊತ್ತಿಲ್ಲದೆಯೋ ನಾವು ಪ್ರೋತ್ಸಾಹ ನೀಡುತ್ತಿದ್ದೇವೆ. ಅಷ್ಟೇ ಯಾಕೆ ಈ ಚೀನಾ ನಿಮರ್ಿತ ಮೊಬೈಲ್ ಬ್ಯಾಟರಿ ಸ್ಪೋಟಿಸಿ ಎಷ್ಟು ಜನ ಸತ್ತಿಲ್ಲ? ಇದೂ ಒಂದು ರೀತಿಯಲ್ಲಿ ಭಾರತದ ಮೇಲೆ ಚೀನಾ ಸಾರಿದ ಯುದ್ದವೇ ಅಲ್ಲವೇ?! ಚೀನಾ ಈ ವಸ್ತುಗಳನ್ನು ತನ್ನ ದೇಶದಲ್ಲಿ ಅಧಿಕೃತವಾಗಿ ಮಾರಾಟ ಮಾಡುವುದಿಲ್ಲ ಎನ್ನುವುದು ನೆನಪಿರಲಿ! ಆದರೆ ನಮಗೆ ಇದೆಲ್ಲಾ ಅರ್ಥವಾಗಬೇಕಲ್ಲ. ನಮಗೆ ದೂಷಿಸುವುದು ಗೊತ್ತೇ ವಿನಃ ಚಿಂತಿಸುವುದು ಗೊತ್ತಿಲ್ಲ. ಒಂದು ವೇಳೆ ಪ್ರತಿಯೊಬ್ಬ ಭಾರತೀಯನೂ ಚಿಂತಿಸಿದ್ದರೆ 2ಜಿ ಹಗರಣ, ಗಣಿ ಹಗರಣ, ಅಷ್ಟೇ ಯಾಕೆ ಒಂದೇ ಕುಟುಂಬಗಳ ಕೈಯಲ್ಲಿ ಈ ದೇಶದ, ರಾಜ್ಯದ ಆಡಳಿತವನ್ನು ನಾವು ಕೊಡುತ್ತಿರಲಿಲ್ಲ. ಮಾಧ್ಯಮಗಳು ಸತ್ಯ ವಿಚಾರ ಬಿಚ್ಚಿಟ್ಟಾಗ ಅದನ್ನು ವಿರೋಧಿಸಿ ಬುದ್ದಿವಂತರಾಗುವ ಕೆಲವರು ಇದನ್ನೇ ರಾಷ್ಟ್ರ ರಕ್ಷಣೆಯ ಜಾಗೃತಿ ಎಂದು ಯಾಕೆ ಅಂದುಕೊಳ್ಳಬಾರದು?
ಮೊನ್ನೆ ಶಾಸಕರ ಸೆಕ್ಸ್ ವೀಕ್ಷಣೆ ಹಗರಣವನ್ನೂ ಮಾಧ್ಯಮಗಳು ಬಯಲಿಗೆ ತಂದಾಗ ಮಾಧ್ಯಮವನ್ನೇ ದೂಷಿಸಿದವರು ಹೆಚ್ಚಾಗಿದ್ದರು. ಇಲ್ಲಿ ಕೆಲವೊಂದು ಮಾಧ್ಯಮಗಳು ಎಡವಿದೆ ಎನ್ನಬಹುದು. ಆದರೆ ಮೊನ್ನೆಯ ಕಾರ್ಯಕ್ರಮವನ್ನು ದೂಷಿಸಿ ಫೇಸ್ಬುಕ್ ಸಾಮಾಜಿಕ ತಾಣದಲ್ಲಿ (ಕು)ಖ್ಯಾತಿ ಗಳಿಸುವ ಅಗತ್ಯತೆ ಏನಿತ್ತು? ಯಾವುದೇ ಫಲಾಪೇಕ್ಷೆಯಿಲ್ಲದೆ ಅಣ್ಣಾ ಹಜಾರೆ ನಡೆಸಿದ ಸತ್ಯಾಗ್ರಹ ವನ್ನೇ ಟಿವಿಯಲ್ಲಿ ಕಂಡು `ಅಜ್ಜೆರೆಗ್ ಉಂದು ಪೂರಾ ಬೋಡಿತ್ತ್ಂಡಾ?(ಮುದುಕ ನಿಗೆ ಇದೆಲ್ಲಾ ಬೇಕಿತ್ತಾ?) ಎಂದು ಉದ್ಘರಿಸಿದ ನಮ್ಮ ಸಮಾಜ ಮಾಧ್ಯಮ ವರದಿಗೆ ಇನ್ನು ಹೇಗೆ ತಾನೇ ಸ್ಪಂದಿಸಲು ಸಾಧ್ಯ? ಸಕರ್ಾರಿ ಶಾಲೆ ನಕ್ಸಲರನ್ನು ಸೃಷ್ಟಿಸುತ್ತಿದೆ ಎಂಬ ರವಿಶಂಕರ್ ಗುರೂಜಿಯವರ ಮಾತು ಫೇಸ್ಬುಕ್ನಲ್ಲಿ ಟೀಕೆಗೆ ಒಳಪಡಲಿಲ್ಲ. ಅಷ್ಟೇ ಯಾಕೆ ಈ ಬಗ್ಗೆ ಚಚರ್ೆಯೂ ನಡೆಯಲಿಲ್ಲ. ಕಾರಣ ಇವರೊಬ್ಬ ಧಾಮರ್ಿಕ ನಾಯಕ ಎಂಬ ಹಣೆಪಟ್ಟಿ ಕಟ್ಟಿಕೊಂಡವರಲ್ಲವೇ? ಈ ಕಾರಣದಿಂದ ಇವರ ಉಸಾಬರಿಗೆ ಯಾರೊಬ್ಬರೂ ಕೈ ಹಾಕಿಲ್ಲ. ಬಹುಶಃ ಇದೇ ಇರಬೇಕು ವಿಪಯರ್ಾಸ.
ನಿತ್ಯಾನಂದರಂತಹ ಸ್ವಾಮೀಜಿಗಳು ಏನೇ ತಪ್ಪು ಮಾಡಿ ಸಿಕ್ಕಿ ಬಿದ್ದರೂ ಮತ್ತೆ ಅವರ ಪಾದಕ್ಕೆರಗುವ ಈ ಸಮಾಜದಲ್ಲಿ ಬಿಚ್ಚಿಡುವ ಸತ್ಯಕ್ಕೆ, ಪತ್ತೆ ಹಚ್ಚುವ ವೈಫಲ್ಯಗಳಿಗೆ ಬೆಲೆ ಎಲ್ಲಿರುತ್ತದೆ? ನಮ್ಮನ್ನು ನಾವು ತಿದ್ದಿಕೊಳ್ಳುವ ಬದಲು ಸಾಮಾಜಿಕ ತಾಣಗಳಲ್ಲಿ ಬೆದರಿಕೆ ಹಾಕುವ ಮಟ್ಟಕ್ಕೆ ನಾವು ಬಂದು ನಿಂತಿದ್ದೇವೆ. ಇದು ಹೀಗೆಯೇ ಮುಂದುವರೆಯಲಿ!

                                            ಧ್ವನಿ

No comments:

Post a Comment