Sunday 20 May 2012

THANKS TO THIS SUNDAY..........!

THANKS TO THIS SUNDAY..........!

ಫ್ರೆಂಡ್ಸ್ ಬ್ಲಾಗ್ ಬರೆಯದೇ ತುಂಬಾ ದಿನಗಳೇ ಆದವು. ಎಕ್ಸಾಂನ ಒತ್ತಡದ ಮಧ್ಯೆ ನನ್ನ ಬರಹಕ್ಕೆ ಸಣ್ಣದೊಂದು ವಿರಾಮ ಕೊಟ್ಟಿದ್ದೆ. ಧ್ವನಿಯ ಬರಹಕ್ಕೆ ಮತ್ತೆ ಮುನ್ನುಡಿಯಿಡುತ್ತಿದ್ದೇನೆ.
ಪ್ರತೀ ಆದಿತ್ಯವಾರ ನನ್ನ ಜೀವನದಲ್ಲಿ ಜಸ್ಟ್ ರಿಲ್ಯಾಕ್ಸ್ ಆಗುವ ದಿನ.  ಕಳೆದು ಹೋದ ಒಂದು ವಾರವನ್ನು ಮತ್ತೆ ಮೆಲುಕು ಹಾಕುವ ದಿನ. ಅದೇ ಟೈಮ್ ವೇಸ್ಟ್ ಸಂಡೇ..ಅದೇ ಆಟ..ಅದೇ ಊಟ...
ಆದ್ರೆ ಈ ಬಾರಿಯ ಸಂಡೇ ಮಾತ್ರ ತುಂಬಾನೇ ಅಂದ್ರೆ ತುಂಬಾನೇ ವಿಶೇಷವಾಗಿತ್ತು.
ಸರಿಸುಮಾರು 12ವರ್ಷಗಳಾದವು ನಾನು ಆ ಸ್ಥಳಕ್ಕೆ ಹೋಗಿ. ಅಲ್ಲಿದ್ದವರ ಮುಖ ನೋಡಿಯೂ ಅಷ್ಟೇ ವರ್ಷಗಳಾಗಿತ್ತು. ತುಂಬಾ ಅಂದ್ರೆ ತುಂಬಾ ಬದಲಾಗಿತ್ತು ಆ ಊರು...ಬದಲಾಗಿತ್ತು ಅಲ್ಲಿನ ಜನಜೀವನ..ಬದಲಾಗಿತ್ತು ಅಲ್ಲಿನ ಜನರ ಜೀವನ ಪದ್ದತಿ..ಹೌದು ಸುಮಾರು ಹನ್ನೆರೆಡು ವರ್ಷಗಳ ಹಿಂದೆ ಇದ್ದ ಯಾವ ಚಿತ್ರಣವೂ ಇಂದು ಅಲ್ಲಿಲ್ಲ. ಎಲ್ಲವೂ ಸ್ತಬ್ಧ..ಇಷ್ಟೆಲ್ಲಾ ಹೇಳ್ತಾ ಇರೋದು ಯಾವ ಸ್ಥಳದ ಬಗ್ಗೆ ಗೊತ್ತಾ?
ನನ್ನ ತಂದೆಯ ಊರಿನ ಬಗ್ಗೆ! ಹುಟ್ಟ್ಟಿದಾಕ್ಷಣ ಕಳೆದುಕೊಂಡ ಜೀವವೊಂದರ ತವರು ನೆಲದ ಬಗ್ಗೆ. ಬದುಕಿನ ಪ್ರತೀ ಕ್ಷಣವನ್ನೂ ಪಕ್ಕಾ ಸೆಂಟಿಮೆಂಟಲ್ ಆಗಿ ನೋಡುವ ನನಗೆ ಈ ಆದಿತ್ಯವಾರ ಅನ್ನೋದೇ ಒಂದು ಭಾವುಕ ದಿನ..ಭಾವುಕ ಕ್ಷಣ..ಎಲ್ಲವೂ ಆಗಿತ್ತು..
ನನ್ನ ತಂದೆಯ ಊರು ದ.ಕ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲ ಸಮೀಪದ ಸಾಲೆತ್ತೂರು. ಒಂದು ಕಾಲದಲ್ಲಿ ಸಂಪೂರ್ಣ ಹಳ್ಳಿಗಾಡು. ವಿಭಿನ್ನ ಜನಜೀವನ. ಆಡು ಭಾಷೆ ತುಳವೇ ಆದರೂ ಅಲ್ಲೂ ವಿಭಿನ್ನತೆ.   ರೈತಾಪಿ ವರ್ಗವನ್ನು ಗುರುತಿಸಬಹುದಾದ ಒಂದು ಸಣ್ಣ ಊರು. ನಾನಲ್ಲಿಗೆ ಕಾಲಿಟ್ಟು ಸರಿಸುಮಾರು ಹನ್ನೆರೆಡು ವರ್ಷಗಳೇ ಸಂದವು. ಆದರೆ ಈ ಬಾರಿ ಯಾಕೋ ಗೊತ್ತಿಲ್ಲ. ನನ್ನ ಮನಸ್ಸು ಅಲ್ಲಿಗೆ ಹೋಗಲೇ ಬೇಕು ಅಂತ ತುಡಿಯುತ್ತಿತ್ತು. ತುಡಿಯುವ ಮನಸ್ಸಿಗೆ ನಿರಾಸೆ ಮಾಡುವ ವ್ಯಕ್ತಿ ನಾನಲ್ಲ. ಬೈಕ್ ಏರಿ ಹೊರಟೇ ಬಿಟ್ಟೆ. ಆಗಲೇ ಅಲ್ಲಿನ ಬದಲಾದ ಚಿತ್ರಣದ ದರ್ಶನ ನನಗಾಗಿದ್ದು...
ಹಳ್ಳಿಗಳು ಎಂದಿಗೂ ಬದಲಾಗೋದಿಲ್ಲ ಅನ್ನುವವರಿದ್ದಾರೆ. ಆದ್ರೆ ಸಾಲೆತ್ತೂರು ಎಂಬ ಹಳ್ಳಿ ಸಣ್ಣ ಮಟ್ಟಿಗೆ ಬದಲಾಗಿದೆ. ಇಲ್ಲಿನ ಜನರ ಜೀವನ ವಿಧಾನ ಬದಲಾಗಿದೆ. ತಾಂತ್ರಿಕತೆ ಇಲ್ಲಿನ ಮನೆ ಹೊಕ್ಕಿದೆ. ಸಿಟಿ ಜನರ ಬದುಕಿನ 75%ದಷ್ಟನ್ನು ಇಲ್ಲಿನ ಜನ ಇಂದು ಅನುಸರಿಸುತ್ತಿದ್ದಾರೆ  ಮತ್ತು ಅನುಭವಿಸುತ್ತಿದ್ದಾರೆ! ಹಳ್ಳಿಗಳು ಉದ್ದಾರವಾಗುತ್ತಿಲ್ಲ ಎನ್ನುವವರಿಗೆ ಇದೊಂದು ಉತ್ತರ. ನಿಜಕ್ಕೂ ಇಲ್ಲಿನ ಜನರ ಜೀವನ ತುಂಬಾನೇ ಗ್ರೇಟ್.
ಆದರೂ ರೈತಾಪಿ ವರ್ಗ, ಉಳುವ ಭೂಮಿ, ಹಚ್ಚ ಹಸಿರಿನ ತೋಟ ಎಂಬ ಹಳ್ಳಿಗಾಡಿನ ಅಧ್ಬುತ ಸೊಗಡಿನ ಚಿತ್ರಣ ಮಾತ್ರ ಇಲ್ಲಿಲ್ಲ. ಈಗ ಎಲ್ಲವೂ ಹೈಫೈ. ನೇಗಿಲು ಹಿಡಿದು ಹೊಲದಲ್ಲಿ ದುಡಿಯುತ್ತಿದ್ದ ರೈತ ಇಂದು ಪ್ಯಾಂಟ್ ಶಟರ್್ ಏರಿಸಿಕೊಂಡು ಸಿಟಿಯತ್ತ ಮುಖಮಾಡಿದ್ದಾನೆ. ಉಳುವ ಭೂಮಿ ಹಚ್ಚ ಹಸಿರಿನ ಆಸರೆಯಿಲ್ಲದೆ ಪಾದಚಾರಿಗಳ ಸ್ವರ್ಗವಾಗಿ ಹೋಗಿದೆ! ಎಲ್ಲೋ ಒಂದೆರೆಡು ಅಡಕೆ ಮರಗಳಿದ್ದರೂ ಅಷ್ಟಕ್ಕಷ್ಟೇ ಎನ್ನುವಂತಾಗಿದೆ..ಇದನ್ನೆಲ್ಲಾ ನೋಡುವಾಗ ಕೊಂಚ ಬೇಸರವೂ ಆಯಿತು. ಆಗ ಮುಗ್ಧ ರೈತರನ್ನು ಮರಳು ಮಾಡಿದ ನಮ್ಮ ಮಾಡ್ರನ್ ಸಿಟಿ ಲೈಫ್ ಬಗ್ಗೆಯೇ ಅಸಹ್ಯ ಹುಟ್ಟಿತು. ಇವೆಲ್ಲದರ ಮಧ್ಯೆ ಹನ್ನೆರೆಡು ವರ್ಷಗಳ ನಂತರದ ಒಂದಷ್ಟು ಸೆಂಟಿಮೆಂಟ್ಗಳು ನೆನಪಾದವು...!
ಫ್ರೆಂಡ್ಸ್, ನಾವೆಲ್ಲಾ ಹೆಚ್ಚಾಗಿ ಪ್ರವಾಸ ಹೋಗ್ತೀವಿ. ಎಲ್ಲೋ ದೂರದ ಊರಿಗೋ, ಕಾಣದ ಜಾಗಕ್ಕೋ ಅಥವಾ ತುಂಬಾನೇ ಗ್ರೇಟ್ ಅನಿಸಿಕೊಂಡ ದೇವರ ಸನ್ನಿಧಾನಕ್ಕೋ ಅಷ್ಟೇ. ಆದ್ರೆ ಒಮ್ಮೆ ಈ ಮೊದಲು ನೀವು ಹೋಗಿದ್ದ, ಈಗ ಹೋಗದೇ ತುಂಬಾನೇ ವರ್ಷಗಳಾದ, ನಿಮ್ಮ ಜೀವಕ್ಕೆ, ಜೀವನಕ್ಕೆ ತುಂಬಾ ಹತ್ತಿರವಾದ, ಹೋದ ತಕ್ಷಣ ಜೀವನದ ಈ ಹಿಂದಿನ ಕ್ಷಣಗಳನ್ನು ನೆನಪಿಸುವ ಸ್ಥಳಗಳಿಗೊಮ್ಮೆ ಜಸ್ಟ್ ಹಾಗೇನೆ ಹೋಗಿ ಬನ್ನಿ. ಆದ್ರೆ ನೆನಪಿರಲಿ, ಇದೊಂದು ಪ್ರವಾಸ ಆಗಿರಬಾರದು. ಜೀವನದ ಈ ಹಿಂದಿನ ಕ್ಷಣಗಳನ್ನು ನೆನಪಿಸುವ ಸಣ್ಣದೊಂದು ಪುಸ್ತಕವಾಗಿರಬೇಕು. ಆಗ ನಿಮ್ಮ ಹಾದಿಯಲ್ಲಿ ಒಂದೊಂದೇ ನೆನಪಿನ ಪುಟಗಳು ತೆರೆದುಕೊಳ್ಳುತ್ತವೆ. ಜೀವನದಲ್ಲಿ ತುಂಬಾನೇ ಎಂಜಾಯ್ ಮಾಡುವ ವ್ಯಕ್ತಿತ್ವ ನಿಮ್ಮದಾಗಿದ್ದರೂ ಆ ಕ್ಷಣ ಮಾತ್ರ ನೀವೊಬ್ಬ ಭಾವುಕ ಜೀವಿಯಾಗ್ತೀರ. ಹಿಂದಿನ ಕ್ಷಣಗಳನ್ನು ನೆನಪು ಮಾಡಿಕೊಳ್ತೀರಾ..ಈ ಸಂದರ್ಭ ನಿಮ್ಮ ಮೈಂಡ್ ಸ್ವಲ್ಪ ರಿಲ್ಯಾಕ್ಸ್ ಆದ್ರೂ ಆಗಬಹುದು. ತರಲೆ, ಹುಚ್ಚಾಟ, ಜಗಳ ಎಲ್ಲದಕ್ಕೂ ಆ ಒಂದು ದಿನ ಬ್ರೇಕ್ ಬೀಳಬಹುದು. ನಿಮ್ಮಲ್ಲೂ ಒಬ್ಬ ಸಣ್ಣ ಚಿಂತಕನೋ ಭಾವುಕ ಜೀವಿಯೋ ಹುಟ್ಟಬಹುದು.
ಏನೇ ಆದರೂ ಈ ಬಾರಿಯ ಆದಿತ್ಯವಾರ ನನಗಂತೂ ತುಂಬಾನೇ ಸ್ಪ್ಪೆಷಲ್ ಡೇ. ಬದುಕಿನ ಪ್ರತೀ ಕ್ಷಣದಲ್ಲೂ ``LIFE IS NOT EASY, SO I AM ALWAYS BUSY’ ಎನ್ನುವ ನಾನು ಈ ಸಂಡೇ ಮಾತ್ರ ಫ್ರೀಯಾಗಿದ್ದ. ಜಂಜಾಟಗಳಿಂದ ದೂರವಿದ್ದೆ. ಕಳೆದು ಹೋದ ನೆನಪಿನ ಬಳಿಗೆ ಹೋಗಿ ಜಸ್ಟ್ ರಿಲ್ಯಾಕ್ಸ್ ಆದೆ.
THANKS TO THIS SUNDAY..........!

Sunday 6 May 2012

ಅನ್ಯ ಧರ್ಮೀಯರು ದೇವಸ್ಥಾನ ಪ್ರವೇಶಿಸುವುದು ತಪ್ಪಾ?

ಅನ್ಯ ಧರ್ಮೀಯರು ದೇವಸ್ಥಾನ ಪ್ರವೇಶಿಸುವುದು ತಪ್ಪಾ?


ಮೊನ್ನೆಯಷ್ಟೇ ಜಗತ್ತಿನ ಅತೀ ಶ್ರೀಮಂತ ದೇವಸ್ಥಾನ ಎನ್ನಲಾದ ತಿರುಪತಿಯಲ್ಲಿ ವಿವಾದವೊಂದು ಸದ್ದು ಮಾಡಿತು. ಆಂಧ್ರದ ಮಾಜಿ ಮುಖ್ಯ ಮಂತ್ರಿ ವೈ.ಎಸ್ ರಾಜಶೇಖರ ರೆಡ್ಡಿಯ ಪುತ್ರ ರಾಜಕೀಯ ಧುರೀಣ ಜಗನ್‌ಮೋಹನ್ ರೆಡ್ಡಿಯೇ ಈ ವಿವಾದದ ಕೇಂದ್ರ ಬಿಂದು. ಕ್ರೈಸ್ತ ಧರ್ಮೀಯ ಜಗನ್ ತಿರುಪತಿ ದೇವಾಲಯಕ್ಕೆ ಪ್ರವೇಶಿಸುವ ಮುನ್ನ ಕೆಲ ಕಟ್ಟುಕಟ್ಟಲೆಗಳನ್ನು ಪಾಲಿಸಿಲ್ಲ ಎನ್ನುವುದೇ ಈಗಿರುವ ವಿವಾದ. ದೇವಸ್ಥಾನದ ಮೂಲಗಳ ಪ್ರಕಾರ ಅನ್ಯಧರ್ಮೀಯರು ತಿಮ್ಮಪ್ಪನ ದರ್ಶನ ಪಡೆಯುವ ಮುನ್ನ ‘ನನಗೆ ತಿಮ್ಮಪ್ಪನ ಮೇಲೆ ನಂಬಿಕೆಯಿದೆ, ಅಪಾರ ಭಕ್ತಿಯಿದೆ ಎಂದು ಬರೆದುಕೊಟ್ಟು ಹೋಗಬೇಕೆಂತೆ! ಆದರೆ ಈ ಕಟ್ಟುಕಟ್ಟಲೆಗಳನ್ನು ಜಗನ್ ಪಾಲಿಸದೆ ವಿವಾದಕ್ಕೆ ಗುರಿಯಾಗಿದ್ದಾರೆ. ಆದರೆ ಇಲ್ಲಿ ಜಗನ್ ವಿವಾದಕ್ಕಿಂತಲೂ ಹೆಚ್ಚಾಗಿ ಚಿಂತಿಸ ಬೇಕಾದ ವಿಚಾರ ಅನ್ಯಧರ್ಮೀಯರು ದೇವಸ್ಥಾನ ಪ್ರವೇಶಿಸುವುದು ತಪ್ಪಾ ಎನ್ನುವುದು.
ನನ್ನ ಪ್ರಕಾರ ಮುಸ್ಲಿಮರ ಮಕ್ಕಾದಿಂದ ಹಿಡಿದು ಕ್ರೈಸ್ತರ ರೋಮ್ ಚರ್ಚಿನವರೆಗೆ ಎಲ್ಲರಿಗೂ ಮುಕ್ತ ಪ್ರವೇಶವಿದೆ. ಭದ್ರತೆಯ ದೃಷ್ಟಿಯಿಂದ ತಪಾಸಣೆ ನಡೆಸುವುದನ್ನು ಬಿಟ್ಟರೆ ದೇಶದ ಬಹುತೇಕ ಚರ್ಚ್, ಮಸೀದಿಗಳಲ್ಲಿ ಅನ್ಯಧರ್ಮೀಯರ ಪ್ರವೇಶಕ್ಕೆ ಯಾವುದೇ ರೀತಿಯ ನಿರ್ಬಂಧವಿಲ್ಲ. ಈ ಮಾತನ್ನು ಆಯಾ ಧರ್ಮಗಳ ಧಾರ್ಮಿಕ ನಾಯಕರುಗಳೇ ಪುಷ್ಠೀಕರಿಸುತ್ತಾರೆ. ಆದರೆ ಹಿಂದುಗಳ ಅತೀ ನಂಬಿಕೆಯ ಕ್ಷೇತ್ರವಾದ ತಿರುಪತಿಯಲ್ಲಿ ಮಾತ್ರ ಯಾಕೆ ಹೀಗೆ? ಅದು ಕೂಡ ಲಿಖಿತವಾಗಿ ಬರೆದುಕೊಟ್ಟ ನಂತರವಷ್ಟೇ ಅನ್ಯಧರ್ಮೀಯರು ತಿಮ್ಮಪ್ಪನ ದರ್ಶನ ಪಡೆಯಬೇಕು ಎನ್ನುವುದು ಎಷ್ಟು ಸರಿ? ಧರ್ಮ ಯಾವುದೇ ಆದರೂ ಕೆಲವರಿಗೆ ಬೇರೆ ಧರ್ಮದ ದೇವರಲ್ಲಿ ಅಪಾರ ನಂಬಿಕೆ. ಈ ವೇಳೆ ಆ ದೇವರ ದರ್ಶನ ಪಡೆಯುವುದು ಸಾಮಾನ್ಯ. ಉದಾಹರಣೆಗೆ ಕ್ರೈಸ್ತರ ಧಾರ್ಮಿಕ ಸ್ಥಳವಾದ ಕಾರ್ಕಳದ ಅತ್ತೂರು ಚರ್ಚ್‌ಗೆ ಭೇಟಿ ನೀಡುವ ಬಹುತೇಕ ಭಕ್ತರಲ್ಲಿ ಹಿಂದುಗಳ ಪಾಲು ಹೆಚ್ಚೇ ಎನ್ನಬಹುದು. ಇನ್ನು ಉಳ್ಳಾಲದ ಇತಿಹಾಸ ಪ್ರಸಿದ್ದ ದರ್ಗಾಕ್ಕೂ ಹಿಂದುಗಳು ಭೇಟಿ ಕೊಡುತ್ತಾರೆ. ಇದೆಲ್ಲಾ ಅವರವರ ನಂಬಿಕೆಗೆ ಬಿಟ್ಟಿದ್ದು. ಹಿಂದುಗಳ ಶಬರಿಮಲೆಗೂ ಲಕ್ಷಾಂತರ ಸಂಖ್ಯೆಯಲ್ಲಿ ಅನ್ಯಧರ್ಮೀಯರು ಭೇಟಿ ಕೊಡುತ್ತಾರೆ. ಇಲ್ಲೂ ಯಾವುದೇ ರೀತಿಯ ನಿರ್ಬಂಧವಿಲ್ಲ. ಆದರೆ ತಿರುಪತಿಯಲ್ಲಿ ಈ ರೀತಿಯ ಕಟ್ಟುಕಟ್ಟಲೆಗಳನ್ನು ರೂಪಿಸಲು ಕಾರಣ ಏನು ಎನ್ನುವುದೇ ತಿಳಿಯುತ್ತಿಲ್ಲ.
ಹಿಂದೂ ಧರ್ಮವನ್ನು ಹೆಚ್ಚು ಹೆಚ್ಚು ಪ್ರಚಾರ ಪಡಿಸಬೇಕು, ನಮ್ಮ ಧರ್ಮ ಜಗತ್ತಿನಲ್ಲೇ ಮಾದರಿ ಧರ್ಮವಾಗಬೇಕು ಎನ್ನುವ ನಮ್ಮಲ್ಲಿ ಇಂತಹ ಆಚರಣೆಗಳಿದ್ದರೆ ಹೇಗೆ ತಾನೆ ಹಿಂದು ಧರ್ಮ ಜಗದ್ವಿಖ್ಯಾತವಾಗಲು ಸಾಧ್ಯ? ಹಿಂದು ಎನ್ನುವುದು ಧರ್ಮವಲ್ಲ, ಇದೊಂದು ಜೀವನ ವಿಧಾನ. ನಮ್ಮ ಆಚರಣೆಗಳು ಕೂಡ ನಮ್ಮ ಜೀವನ ವಿಧಾನಗಳೇ. ಹೀಗಿರುವಾಗ ತಿರುಪತಿಯಲ್ಲಿ ಆಚರಿಸಲ್ಪಡುತ್ತಿರುವ ಈ ಆಚರಣೆ ಹಿಂದೂ ವಿರೋಧಿಯಲ್ಲವೇ? ಈ ಬಗ್ಗೆ ಅಲ್ಲಿನ ಕೆಲವರು ಅದೆಷ್ಟೋ ಕಾರಣಗಳನ್ನು ನೀಡಬಹುದು. ಅನ್ಯಧರ್ಮೀಯರು ನಮ್ಮ ಸಂಸ್ಕೃತಿ ಪಾಲಿಸುವುದಿಲ್ಲ, ಅಶುದ್ದರಾಗಿ ದೇವಸ್ಥಾನ ಪ್ರವೇಶಿಸುತ್ತಾರೆ ಎನ್ನಬಹುದು. ಹಾಗೆಂದು ನಾವು ತಿಮ್ಮಪ್ಪನನ್ನು ನಂಬುತ್ತೇವೆ ಎಂದು ಲಿಖಿತವಾಗಿ ಬರೆದುಕೊಟ್ಟರೆ ಅನ್ಯಧರ್ಮೀಯರು ಸಂಸ್ಕೃತಿ ಕಲಿಯುತ್ತಾರೆಯೇ? ಅಥವಾ ಪರಿಪೂರ್ಣ ಶುದ್ದರಾಗಿಯೇ ದೇವಸ್ಥಾನ ಪ್ರವೇಶಿಸಿದಂತಾ ಗುತ್ತದೆಯೇ? ದೇವರ ಆರಾಧಕ ಕೇಂದ್ರಗಳು ಎಂದಿಗೂ ಇನ್ನೊಬ್ಬರ ಸ್ವತ್ತಲ್ಲ ಎನ್ನುವುದು ನೆನಪಿರಲಿ. ಅನ್ಯಧರ್ಮೀಯರು ಪ್ರವೇಶಿಸಿದ ತಕ್ಷಣ ದೇವಾಲಯದ ಪಾವಿತ್ರ್ಯತೆಗೆ ಧಕ್ಕೆ ಬರುತ್ತದೆ ಅನ್ನುವುದಾದರೆ ಇಂದಿಗೂ ನಮ್ಮ ದೇವಸ್ಥಾನಗಳಲ್ಲಿ ಪಾವಿತ್ರ್ಯತೆ ಹಾಳುಗೆಡಹುವ ಅದೆಷ್ಟೋ ವಿದ್ಯಮಾನಗಳು ನಡೆಯುತ್ತಿವೆ. ದೇವರ ಹೆಸರಿನಲ್ಲಿ ಆಡಳಿತ ಮಂಡಳಿಯೇ ಅನಾಚಾರ ನಡೆಸುತ್ತಿದೆ. ದೇವಸ್ಥಾನಗಳ ಜಗಳ ಬೀದಿಗೆ ಬಂದಿವೆ. ಅಷ್ಟೇ ಯಾಕೆ ವಿವಾದದ ಕೇಂದ್ರ ಬಿಂದುವಾದ ತಿರುಪತಿಯಲ್ಲೇ ದೇವರ ದರ್ಶನದ ವಿಚಾರವಾಗಿ ಅದೆಷ್ಟೋ ಬಾರಿ ವಿವಾದಗಳೆದ್ದಿವೆ. ಇಷ್ಟೆಲ್ಲಾ ಅನಾಚಾರಗಳು ದೇವಸ್ಥಾನದ ಅಂಗಳದಲ್ಲೇ ನಡೆದರೆ ದೇವಾಲಯದ ಪಾವಿತ್ರ್ಯತೆಗೆ ಧಕ್ಕೆ ಬರುವುದಿಲ್ಲವೇ? ಒಂದು ವೇಳೆ ಇದರಿಂದ ಧಕ್ಕೆಯಾಗುವುದಿಲ್ಲ ಎನ್ನುವುದಾದರೆ ಅನ್ಯಧರ್ಮೀಯರ ಪ್ರವೇಶಕ್ಕೆ ತಿರುಪತಿಯಲ್ಲಿ ಅನುಸರಿಸುವ ನಿಯಮಗಳ ಬಗ್ಗೆ ನನ್ನ ಸಹಮತವಿದೆ.
ಇಂತಹ ಪದ್ದತಿ ತಿರುಪತಿಯಲ್ಲಿ ಮುಂದುವರೆದರೆ ವಿದೇಶಿಗರಿಗೆ ಜಗತ್ತಿನ ಅತೀ ಶ್ರೀಮಂತ ದೇವಾಲಯವನ್ನು ನೋಡುವ ಅವಕಾಶವೇ ತಪ್ಪಿ ಹೋಗಬಹುದು. ಇದರಿಂದ ಮುಂದೆ ನಮ್ಮ ಪ್ರವಾಸೋದ್ಯಮಕ್ಕೂ ಏಟು ಬೀಳಬಹುದು. ಒಂದು ವೇಳೆ ಕ್ರೈಸ್ತರಾಗಲಿ, ಮುಸ್ಲಿಮರಾಗಲಿ ಅವರ ಧಾರ್ಮಿಕ ಕೇಂದ್ರವನ್ನು ಪ್ರವೇಶಿಸುವ ಮುನ್ನ ಹಿಂದುಗಳು ಲಿಖಿತವಾಗಿ ‘ನಾನು ಏಸುವನ್ನು ನಂಬುತ್ತೇನೆ, ಅಪಾರ ಭಕ್ತಿಯಿದೆ ‘ನಾನು ಅಲ್ಲಾಹ್‌ನನ್ನು ನಂಬುತ್ತೇನೆ ಎಂದು ಬರೆದು ಕೊಡಿ ಎಂದರೆ ಏನಾಗಬೇಡ? ಒಮ್ಮೆ ಯೋಚಿಸಿ, ನಮ್ಮ ಹಿಂದೂ ಸಂಘಟನೆಗಳು ಇದಕ್ಕೆ ಮತಾಂತರದ ಹಣೆಪಟ್ಟಿ ಕಟ್ಟಿ ಗಲಾಟೆ ಎಬ್ಬಿಸುವುದಂತೂ ಗ್ಯಾರಂಟಿ. ಆದರೆ ಎಂದೂ ಅನ್ಯಧಮೀಯರ ಪ್ರವೇಶವನ್ನು ಇವರು ನಿರ್ಬಂಧಿಸಿಲ್ಲ. ಬಹುಶಃ ಹೀಗಾಗಿಯೋ ಏನೋ ಜಗತ್ತಿನಲ್ಲೇ ಕ್ರೈಸ್ತ ಧರ್ಮ ಅತೀ ದೊಡ್ಡ ಧರ್ಮವಾಗಿ ಬೆಳೆದಿರುವುದು.
ಹಿಂದೂಗಳಿಗೆ ನಮ್ಮದೇ ಆದ ಕೆಲವೊಂದು ಆಚರಣೆಗಳು, ಧಾರ್ಮಿಕ ನಂಬಿಕೆಗಳು ಇದೇ ಎನ್ನುವುದೇನೋ ಸರಿ. ಆದರೆ ಈ ನಂಬಿಕೆಯ ಹೆಸರಿನಲ್ಲಿ ಇತರೆ ಧರ್ಮೀಯರ ದೇವಸ್ಥಾನ ಪ್ರವೇಶಕ್ಕೆ ಲಿಖಿತ ಕಟ್ಟುಕಟ್ಟಲೆಗಳನ್ನು ವಿಧಿಸುವುದು ಸರಿಯಲ್ಲ. ಈಗಾಗಲೇ ತಿರುಪತಿ ಎನ್ನುವುದು ಹಣದ ಹೊಳೆ ಹರಿಸುವ ಧಾರ್ಮಿಕ ಕೇಂದ್ರವಾಗಿ ಬದಲಾಗಿದೆ. ಇಲ್ಲಿ ನಂಬಿಕೆ, ಭಕ್ತಿ, ಪೂಜೆಗೆ ಜಾಗವಿರುವುದು ಕೆಲವೇ ಸಕೆಂಡ್‌ಗಳಷ್ಟೇ. ಹೀಗಿರುವಾಗ ತಿಮ್ಮಪ್ಪನ ಸನ್ನಿಧಾನದಲ್ಲಿ ಇನ್ನಿಲ್ಲದ ನಿಯಮಗಳನ್ನು ಜಾರಿಗೆ ತಂದು ದೇವರ ಹೆಸರು ಕೆಡಿಸುವುದು ಎಷ್ಟು ಸರಿ?
ಹಿಂದು ಎಂಬ ಜೀವನ ವಿಧಾನವನ್ನು ಅನ್ಯಧರ್ಮಿಯರು ಆಚರಿಸಲಿ ಎಂದು ನಾವು ಹೇಳುವುದಿಲ್ಲ. ಅವರಾಗಿಯೇ ಇಷ್ಟಪಟ್ಟರೆ ವಿರೋಧಿಸುವವರೂ ಹಿಂದುಗಳಲ್ಲ. ಹೀಗಿರುವಾಗ ತಿರುಪತಿಯ ಘಟನೆಯನ್ನು ಹಿಂದುಗಳು ಖಂಡಿಸಲೇ ಬೇಕು. ರಾಮನಿಗೆ ರಾಮಮಂದಿರ ಕಟ್ಟಿ, ಜಗತ್ತಿಗೇ ಹಿಂದೂ ಧರ್ಮದ ಬಗ್ಗೆ ಸಾರಿ ಹೇಳಲು ಹೊರಟ ನಮಗೆ ಇಂಥ ಆಚರಣೆಗಳ ಅವಶ್ಯಕತೆ ಖಂಡಿತಾ ಇಲ್ಲ.

ಧ್ವನಿ

Wednesday 2 May 2012

ಕಾಮರ್ಿಕ ದಿನವೂ ಐಶಾರಾಮಿ ಜನರ ಆಚರಣೆಯಾಗುತ್ತಿದೆಯೇ?

ಕಾಮರ್ಿಕ ದಿನವೂ ಐಶಾರಾಮಿ ಜನರ ಆಚರಣೆಯಾಗುತ್ತಿದೆಯೇ?

 

ಕಾಮರ್ಿಕರ ಹಕ್ಕುಗಳನ್ನು ಎಚ್ಚರಗೊಳಿಸಿದ, ಕಾಮರ್ಿ ಕರಿಗೂ ಒಂದು ಆಚರಣೆಯನ್ನು ಕಲ್ಪಿಸಿಕೊಟ್ಟ ದಿನವೆಂದರೆ ಅದು ಕಾಮರ್ಿಕ ದಿನ. ಬಹುಶಃ ಜಗತ್ತಿನ ಹೆಚ್ಚಿನ ಎಲ್ಲಾ ರಾಷ್ಟ್ರಗಳಲ್ಲಿ ಕಾಮರ್ಿಕ ದಿನದ ಆಚರಣೆ ನಡೆದೇ ನಡೆಯು ತ್ತದೆ. ಆದರೆ ಇತ್ತೀಚಿನ ದಿನಗಳಲ್ಲಿ ಈ ಕಾಮರ್ಿಕ ದಿನವೆಂ ಬುದು ನೈಜ ಶ್ರಮಿಕ ವರ್ಗದಿಂದ ದೂರವಾಗುತ್ತಿದೆಯೇ ಎಂಬ ಅನುಮಾನ ಕಾಡುತ್ತದೆ. ಕಾಮರ್ಿಕ ದಿನದಂದು   ಇರುವ ಸಕರ್ಾರಿ ರಜಾ ದಿನಗಳ ಬಿಡುವು ಕೂಡ ಮೈ ಬಗ್ಗಿಸಿ ದುಡಿಯುವ ಶ್ರಮಿಕ ವರ್ಗಕ್ಕೆ ಸಿಗುತ್ತಿಲ್ಲ. ಬದಲಾಗಿ ಹವಾನಿಯಂತ್ರಿತ ಕೊಠಡಿಗಳಲ್ಲಿ ಕಾಲ ಮೇಲೆ ಕಾಲು ಹಾಕಿ ದಿನಕ್ಕೆ ಇಂತಿಷ್ಟೇ ಎಂದು ಕೆಲಸ ಮಾಡುವ ಒಂದು ಐಶಾ ರಾಮಿ ವರ್ಗ ಮೇ ದಿನದ ಮಜಾ ಅನುಭವಿಸುತ್ತಿದೆ. ಇದು ಇಂದು ನಿನ್ನೆಯ ವಿಚಾರವಲ್ಲ. ಸರಿಸುಮಾರು ವರ್ಷಗಳಿಂದ ನೈಜ ಶ್ರಮಿಕ ವರ್ಗ ಮೇ ದಿನದ ಅಂದರೆ ತನ್ನದೇ ದಿನದ ಆಚರಣೆಯಿಂದ ವಂಚಿತವಾಗುತ್ತಿದೆ.
ದಿನಕ್ಕೆ ಎಂಟು ಘಂಟೆ ಕೆಲಸಕ್ಕೆ ಆಗ್ರಹಿಸಿ ಆರಂಭ ವಾದ ಶ್ರಮಿಕ ವರ್ಗದ ಹೋರಾಟಕ್ಕೆ ಮೇ ದಿನ(ಕಾಮರ್ಿಕ ದಿನ) ಒಂದು ದಿನವಷ್ಟೇ. ಈ ದಿನದಲ್ಲಾದರೂ ಕಾಮರ್ಿ ಕರು ತಮ್ಮ ನಿತ್ಯದ ಹೋರಾಟದ ಬದುಕನ್ನು ಬದಿಗಿಟ್ಟು ತನ್ನ ಭವಿಷ್ಯದ ಬಗ್ಗೆ ಚಿಂತಿಸಲಿ ಎನ್ನುವುದೇ ಈ ದಿನದ ಆಶಯ. ಆದರೆ ಈ ಆಶಯಗಳೇ ಇಂದು ಸಾಕಾರಗೊಳ್ಳು ತ್ತಿಲ್ಲ. ವರ್ಷಪೂತರ್ಿ ದುಡಿಯುವ ಕಾಮರ್ಿಕ ವರ್ಗ ಈ ದಿನವೂ ಬೆವರಿಳಿಸಿ ದುಡಿಯಬೇಕಾದ ಅನಿವಾರ್ಯತೆ ಒದ ಗಿದೆ. ಅನ್ನ ಹಾಕುವ ಒಡೆಯನ ಆಜ್ಞೆಗಳನ್ನು ಮೀರಿ ಮೇ ದಿನದ ನೆಪದಲ್ಲಿ ರಜಾ ಹಾಕಿದರೆ ಪ್ರತೀ ದಿನವೂ ಮೇ ದಿನವಾಗುವುದರಲ್ಲ್ಲಿ ಸಂದೇಹವಿಲ್ಲ. ಶ್ರಮಿಕ ವರ್ಗದ ಮೇಲೆ ಇಂತಹ ಅದೆಷ್ಟೋ ದೌರ್ಜನ್ಯಗಳು ಧನಿಕರಿಂದ ನಡೆಯು ತ್ತಲೇ ಇದೆ. ಎಂಟು ಘಂಟೆ ಕೆಲಸ ಮಾಡಬೇಕಾದ ಕಾಮರ್ಿಕ ಹತ್ತರಿಂದ ಹದಿನೈದು ಘಂಟೆ ದುಡಿಯುವುದೂ ಇದೆ. 
ಇದನ್ನು ವಿರೋಧಿಸಿದರೆ ಮುಂದಿನ ಭವಿಷ್ಯವೇ ಕತ್ತಲಾಗು ವುದು ನಿಶ್ಚಿತ. ಇನ್ನು ಕಾಮರ್ಿಕರಿಗೆ ದೊರಕಬೇಕಾದ ಸವ ಲತ್ತುಗಳು ಎನ್ನುವುದು ಮರೀಚಿಕೆಯೇ ಸರಿ. ಪಿಎಫ್, ಇಎಸ್ ಐನಂತಹ ಬಡ ಶ್ರಮಿಕ ವರ್ಗದ ಆಸರೆ ಯೋಜನೆಗಳು ಇಂದು ಎಷ್ಟು ಮಂದಿ ಕಾಮರ್ಿಕರಿಗೆ ಸಿಗುತ್ತಿದೆ? ಇಂತಹ ಯೋಜನೆಗಳ ಲಾಭ ಪಡೆಯುವುದು ತಿಂಗಳಿಗೆ 60-70ಸಾವಿರ ಸಂಬಳ ಪಡೆಯುವ ಉದ್ಯೋಗಿಗಳೇ ಹೊರತು ದಿನಪೂತರ್ಿ ಬಿಸಿಲಿನ ಬೇಗೆಗೆ ಬೆವರಿಳಿಸಿ ದುಡಿಯುವ ಕಾಮರ್ಿಕರಲ್ಲ. ಮೊನ್ನೆ ಯಷ್ಟೇ ಫೇಸ್ಬುಕ್ ಎಂಬ ಸಾಮಾಜಿಕ ತಾಣದಲ್ಲಿ ಇದೇ  ಕಾಮರ್ಿಕ ದಿನದ ಶುಭಾಶಯದ ಗ್ರೀಟಿಂಗ್ಸ್ ಒಂದು ನನ್ನನ್ನು ಚಿಂತನೆಗೆ ಹಚ್ಚಿತು. ಸೂಟು-ಬೂಟು ಹಾಕಿಕೊಂಡ ವ್ಯಕ್ತಿಯೊಬ್ಬ ಬಡ ಕಾಮರ್ಿಕನೊಬ್ಬನ ಬೆನ್ನ ಮೇಲೆ ನಿಂತು ಕಾಮರ್ಿಕ ದಿನದ ಶುಭಾಶಯ ಕೋರುವ ಬ್ಯಾನರ್ ಹಾಕುವ ಚಿತ್ರವದು. ಈ ಚಿತ್ರವೇ ಸೂಚಿಸುವಂತೆ ಇಂದಿಗೂ ಕಾಮರ್ಿಕ ವರ್ಗವನ್ನು ಎಷ್ಟು ಕೀಳಾಗಿ ಕಾಣಲಾಗುತ್ತಿದೆ ಎನ್ನುವುದಕ್ಕೆ ಇದೊಂದು ಉದಾಹರಣೆಯಷ್ಟೇ. ಆದರೆ ನಮ್ಮ ಕೆಲ ಫೇಸ್ಬುಕ್ ಪ್ರಿಯರಿಗೆ ಇದರ ನೈಜ ಅರ್ಥವನ್ನು ತಿಳಿದುಕೊಳ್ಳುವ ಸಾವಧಾನವಂತು ಇಲ್ಲವೇ ಇಲ್ಲ. ಒಂದೇ ಸಮನೆ ಕಮೆಂಟ್ಸ್ಗಳ ಮೇಲೆ ಕಮೆಂಟ್ಸ್, ಲೈಕ್ಗಳ ಮೇಲೆ ಲೈಕ್! ನಿಜಕ್ಕೂ ವಿಪಯರ್ಾಸ ಅಂದ್ರೆ ಇದೇ ಇರಬೇಕು.
ಲವರ್ಸ್ ಡೇ, ಫ್ರೆಂಡ್ಶಿಪ್ ಡೇ, ಮದರ್ಸ್ ಡೇಗಳಂತೆ ಶ್ರಮಿಕ ವರ್ಗದ ಕಾಮರ್ಿಕ ದಿನವೂ ಐಶಾರಾಮಿ ಜನರ ಮಜಾ ಉಡಾಯಿ ಸುವ, ಶುಭಾಶಯ ಕೋರುವ ದಿನವಾಗಿ ಬದಲಾಗುತ್ತಿದೆ. ಯಾವ ಉದ್ದೇಶಗಳ ಈಡೇರಿಕೆಗಾಗಿ ಈ ದಿನವನ್ನು ಆಚರ ಣೆಗೆ ತರಲಾಯಿತೋ ಅದು ಇಂದು ಈಡೇರುತ್ತಿಲ್ಲ. ಈ ದಿನವಾ ದರೂ ಸ್ವಲ್ಪ ಬಿಡುವು ಮಾಡಿಕೊಳ್ಳಬೇಕಾದ ಬಡ ಶ್ರಮಿಕ ವರ್ಗ ಚಾಚೂ ತಪ್ಪದೇ ಬೆವರಿಳಿಸುತ್ತಿದೆ. ಆದರೆ ತಿಂಗಳಿಗೆ ಸಾವಿರಾರು ರುಪಾಯಿ ಎಣಿಸುವ ಉದ್ಯೋಗಿಗಳು ಮಾತ್ರ ಮೇ ದಿನದ ಹೆಸರಿನಲ್ಲಿ ರಜಾದ ಮಜಾ ಅನುಭವಿಸಿ ಪಾಕರ್್, ಬೀಚ್ ಸುತ್ತುತ್ತಿದ್ದಾರೆ. ಅಮೆರಿಕಾದಂತಹ ಮುಂದುವರೆದ ರಾಷ್ಟ್ರಗಳಲ್ಲಿ ಮೇ ದಿನ ಐಶಾರಾಮಿ ಜನರ ಸ್ವತ್ತಾಗಿ ಹೋದರೂ ಪರವಾಗಿಲ್ಲ. ಯಾಕೆಂದರೆ ಅಲ್ಲಿನ ಪ್ರತೀ ಶ್ರಮಿಕ ವರ್ಗವು ಒಂದು ಹಂತಕ್ಕೆ ಐಶಾರಾಮಿಗಳೇ. ಆದರೆ ಭಾರತದಲ್ಲಿ ಹಾಗಲ್ಲ. ಇಲ್ಲಿನ ಶ್ರಮಿಕ ವರ್ಗಕ್ಕೆ ಐಶಾರಾಮ ಎನ್ನುವುದು ಕೇವಲ ಕನಸು ಮಾತ್ರ. ಹೀಗಿರುವಾಗ ತಮ್ಮ ಹಕ್ಕುಗಳನ್ನು ಪ್ರತಿಪಾದಿ ಸಲು ಇರುವ ಏಕೈಕ ದಿನವೂ ಕಾಮರ್ಿಕರಿಂದ ಕಳೆದು ಹೋಗು ತ್ತಿರುವುದು ವಿಪಯರ್ಾಸ. ಬಹುಶಃ ಇಂತಹ ವಿದ್ಯಮಾನ ಭಾರ ತದಲ್ಲಿ ಮಾತ್ರ ಘಟಿಸಲು ಸಾಧ್ಯ!
ಕಾಮರ್ಿಕರ ಹೋರಾಟಕ್ಕೆ ಧ್ವನಿಯಾಗಿ ಅದೆಷ್ಟೋ ಸಂಘ ಟನೆಗಳಿದ್ದರೂ ಅದು ತನ್ನ ನೈಜ ಉದ್ದೇಶಕ್ಕಾಗಿ ಹೋರಾಡು ತ್ತಿಲ್ಲ. ಬದಲಾಗಿ ತನ್ನ ಎಡಪಂಥೀಯ ಧೋರಣೆಗಳ ಅನುಷ್ಠಾ ನಕ್ಕಾಗಿಯೇ ಶ್ರಮಿಸುತ್ತಿದೆ. ಈ ಹಿಂದೆ ಕೇರಳ, ಪಶ್ಚಿಮ ಬಂಗಾಳ ದಂತಹ ರಾಜ್ಯಗಳಲ್ಲಿ ಕಾಮರ್ಿಕರ ಹಿತಾಸಕ್ತಿಯ ರಕ್ಷಣೆಗೆ ಹೋರಾಟಗಳು ನಡೆಯುತ್ತಿತ್ತಾದರೂ ಅದು ಸಾಕಾರಗೊಳ್ಳು ತ್ತಿರಲಿಲ್ಲ. ಹೋರಾಟಗಳು ಬಂದ್, ಗಲಾಟೆ, ಪ್ರತಿಭಟನೆಗ ಳಲ್ಲೇ ಕಳೆದು ಹೋಗುತ್ತಿದ್ದವು. ಇಂದಿಗೂ ಕೆಲ ರಾಜ್ಯಗಳಲ್ಲಿ ಈ ಚಿತ್ರಣ ಬದಲಾಗಿಲ್ಲ. ಇನ್ನು ನಮ್ಮ ಸಕರ್ಾರ ಕಾಮರ್ಿಕರಿ ಗಾಗಿ ರೂಪಿಸುವ ಯೋಜನೆಗಳಂತೂ ಹಳ್ಳ ಹಿಡಿಯುತ್ತಿವೆ. ಏನೇ ಮಾಡಿದರೂ ಭಾರತದಂತ ರಾಷ್ಟ್ರದಲ್ಲಿ ಕಾಮರ್ಿಕ ವರ್ಗ ಎನ್ನುವುದು ಮೇಲೆ ಬರುವುದು ಕನಸಿನ ಮಾತೇ ಸರಿ. ತಂತ್ರ ಜ್ಞಾನಗಳು ಕಾಮರ್ಿಕರ ಕೆಲಸವನ್ನು ಕಿತ್ತುಕೊಳ್ಳುವ ಈ ದಿನಗ ಳಲ್ಲಿ ಶ್ರೀಮಂತ ವರ್ಗವೂ ಬಡ ಶ್ರಮಿಕನ ಹಕ್ಕುಗಳ ಮೇಲೆ ಸವಾರಿ ಮಾಡುತ್ತಿದೆ ಎನ್ನುವುದು ಅಷ್ಟೇ ಸತ್ಯ.
 

Tuesday 1 May 2012

ಪ್ರತೀ ಮನುಷ್ಯನೂ ತನ್ನ ಮನಸ್ಥಿತಿಯ ಮೇಲೆ ಸವಾರಿ ಮಾಡ್ತಾನೆ

ಪ್ರತೀ ಮನುಷ್ಯನೂ ತನ್ನ ಮನಸ್ಥಿತಿಯ ಮೇಲೆ ಸವಾರಿ ಮಾಡ್ತಾನೆ

ನಾನು ಪತ್ರಿಕೆಯಲ್ಲಿ ಕೆಲಸ ಮಾಡುವವನು. ಅದರಲ್ಲೂ ನಮ್ಮ ಪತ್ರಿಕೆಯಲ್ಲಿ ಕ್ರೈಂ ಸುದ್ದಿಗಳಿಗೆ ಮೊದಲ ಆದ್ಯತೆ. ಹೆಚ್ಚೆಂದರೆ ವಾರಕ್ಕೆ ಎರಡು ಮರ್ಡರ್ ಕಥಾನಕವಾದ್ರೂ ನಮ್ಮ ಪತ್ರಿಕೆಯಲ್ಲಿ ಲೀಡ್ ಆಗುತ್ತೆ. ಪತ್ರಿಕೆಯ ಕೆಲಸಕ್ಕೆ ಸೇರಿದಾಗ ಇಂತಹ ನ್ಯೂಸ್ಗಳನ್ನು ಎಡಿಟ್ ಮಾಡೋಕೆ ಅಂತ ಕುಳಿತರೇನೆ ಒಮ್ಮೆ ಬೆಚ್ಚಿ ಬೀಳ್ತಿದ್ದೆ. ಯಾಕೆಂದರೆ ಕೆಲವೊಂದು ಕೊಲೆಗಳೇ ಅಷ್ಟು ಭಯಾನಕವಾಗಿರುತ್ತೆ. ಆದ್ರೆ ಅನುಭವ ಮನುಷ್ಯನನ್ನೇ ಬದಲಾಯಿಸುತ್ತೆ ಅನ್ನೋ ಹಾಗೆ, ಒಂದೇ ತಿಂಗಳಲ್ಲಿ ನಾನು ಇಂತಹ ಕ್ರೈಂ ಸುದ್ದಿಗಳಿಗೆ ಹೊಂದಿಕೊಂಡು ಬಿಟ್ಟಿದ್ದೆ. ಆದ್ರೂ ಕೊಲೆಗಾರ ಎಷ್ಟು ಕ್ರೂರಿ ಅಲ್ವಾ ಅನ್ನೋದು ನಾನು ಪ್ರತೀ ರಿಪೋಟರ್್ಗಳನ್ನು ತಿರುವಿ ಹಾಕಿದಾಗ ನನಗೆ ಸ್ಪಷ್ಟವಾಗ್ತಾ ಇತ್ತು.
ಸುಮಾರು ವರ್ಷಗಳ ಹಿಂದೆ ಮನೆಯಲ್ಲಿ ಕ್ರೈಂ ಸ್ಟೋರಿ ನೋಡ್ತಾ ಇದ್ದೆ. ಆಗ ಅಲ್ಲೊಂದು ಬೆಚ್ಚಿ ಬೀಳಿಸುವ ಮರ್ಡರ್ ಮಿಸ್ಟರಿ ಪ್ರತ್ಯಕ್ಷವಾಯಿತು. ಚಿಕ್ಕಂದಿನಲ್ಲಿ ಸಹಜವಾಗಿಯೇ ಕುತೂಹಲ ಇದ್ದದ್ದೇ. ಆದರೆ ಅದನ್ನು ನೋಡಿ ಮಲಗಿದ್ದ ನಾನು ಮಧ್ಯರಾತ್ರಿ ಹನ್ನೆರಡು ಘಂಟೆಗೆ ಬೆಚ್ಚಿ ಬಿದ್ದಿದ್ದೆ. ಯಾಕೆಂದರೆ ಹಾಗಿತ್ತು ಆ ಕೊಲೆ! ಆವಾಗಿಂದ ಕೊಲೆಗಾರ ಎಷ್ಟು ಕ್ರೂರಿಯಲ್ವಾ ಅಂತ ನನ್ನಲ್ಲೇ ನಾನು ಪ್ರಶ್ನೆ ಮಾಡ್ತೇನೆ. ಅದೆಷ್ಟೋ ಮಂದಿ ಸಿಗದ ಪ್ರೀತಿಗಾಗಿ, ಮಾನವೀಯ ಸಂಬಂಧಕ್ಕಾಗಿ, ಭಾವನೆಗಳನ್ನು ಹಂಚಿಕೊಳ್ಳುವ ಜೀವಕ್ಕಾಗಿ ಕಾಯ್ತಾ ಇರ್ತಾರೆ. ಆದ್ರೆ ಕೆಲ ಹಂತಕರಿಗೆ ಇದೆಲ್ಲಾ ಬೇಡವಾ? ಅಥವಾ ಇವೆಲ್ಲವನ್ನ ಅನುಭವಿಸಿದ ನಂತರವೇ ಅವರೊಳಗಿನ ಹಂತಕ ಜಾಗೃತನಾಗ್ತಾನಾ? ಕೆಲವೊಂದು ಕೊಲೆಯ ಹಿಂದಿನ ಪುಟಗಳನ್ನು ಬಿಚ್ಚಿಟ್ಟರೆ ಇಂತಹ ಸಾಧ್ಯತೆಗಳು ನಿಚ್ಚಳಲವಾಗಿರುತ್ತೆ.
ನಮ್ಮೂರಲ್ಲಿ ಒಂದು ಪದ್ದತಿಯಿದೆ. ಪತ್ತನಾಜೆ ಎಂಬ ದಿನ ಜಾಗಕ್ಕೆ ರಕ್ತ ಕೊಡುವ ನೆಪದಲ್ಲಿ ಕೋಳಿಗಳನ್ನು ಕೊಯ್ಯಲಾಗುತ್ತೆ. ಇದು ಹಿಂದಿನಿಂದಲೂ ತುಳುನಾಡಿನಲ್ಲಿ ನಡೆದುಕೊಂಡು ಬಂದ ಸಂಪ್ರದಾಯ. ನಮ್ಮ ಮನೆಯಲ್ಲೂ ಈ ಸಂಪ್ರದಾಯ ಯಥಾವತ್ತಾಗಿ ನಡೀತಾ ಇತ್ತು. ಆಗೆಲ್ಲಾ ನಾವು ಚಿಕ್ಕವರಾಗಿದ್ದ ಕಾರಣ ಪಕ್ಕದ ಮನೆಯವರು ಬಂದು ಕೋಳಿಯ ಕತ್ತು ಕಡಿದು ರಕ್ತ ಅಪರ್ಿಸ್ತಾ ಇದ್ರೂ. ನಾನು ಅದನ್ನು ನೋಡಿ ಬೆಳದಿದ್ದೆನೆ ವಿನಃ ಅದರ ಪ್ರಯೋಗವನ್ನು ನಾನು ಮಾಡಿರಲಿಲ್ಲ. ಆದ್ರೆ ನಾನು ದೊಡ್ಡವನಾದ ಮೇಲೆ ನೆರೆಮನೆಯವರನ್ನು ಕರೆಯೋದು ಬೇಡವೆಂದು ನನ್ನ ಅಜ್ಜಿ ನನ್ನಿಂದಲೇ ಕೋಳಿಯ ಕತ್ತು ಕುಯ್ಯಲು ಹೇಳಿದರು. ಅಂದು ಹೇಗೋ ಕೈ ನಡುಗುತ್ತಾ ಒಲ್ಲದ ಮನಸ್ಸಿನಿಂದ ಕೆಲಸ ಮುಗಿಸಿದೆ. ಆದರೆ ಅದೇ ಕೊನೆ ಅಂದಿನಿಂದ ನಮ್ಮ ಮನೆಯಲ್ಲಿ ಅಂತಹ ಸಂಪ್ರದಾಯಕ್ಕೆ ನಾನಾಗಿಯೇ ತಾತ್ಕಾಲಿಕ ಅನ್ನೋ ಹಾಗೆ ಬ್ರೇಕ್ ಹಾಕಿದ್ದೇನೆ. ಯಾಕೋ ಗೊತ್ತಿಲ್ಲ? ಹಿಂಸೆಗೂ ನನಗೂ ಮಾರುದ್ದ ದೂರ. ಪ್ರೀತಿ ವಿಚಾರದಲ್ಲಿ, ಒಬ್ಬರನ್ನು ತುಂಬಾ ಹಚ್ಚಿಕೊಳ್ಳೋದರಲ್ಲಿ ತುಂಬಾ ಅಂದ್ರೆ ತುಂಬಾ ಹತ್ತಿರ. ಆಗೆಲ್ಲಾ ನಾನು ಒಂದು ವಿಚಾರವನ್ನು ಪದೇ ಪದೇ ಯೋಚನೆ ಮಾಡ್ತೇನೆ. ಮನುಷ್ಯತ್ವದ ಪರಿಚಯವೇ ಇಲ್ಲದ ರೀತಿಯಲ್ಲಿ ಕೊಲೆ ಮಾಡುವ ಹಂತಕನ ಮನಸ್ಥಿತಿ ಹೇಗಿರಬೇಡ ಅಂತ. ಆದ್ರೂ ಹಂತಕ ಗ್ರೇಟ್! ಆತ ಆತನ ಮನಸ್ಥಿತಿಯೇ ಮೇಲೆಯೇ ಸವಾರಿ ಮಾಡ್ತಾನೆ. ಒಂದು ಜೀವವನ್ನು ಅನಾಮತ್ತಾಗಿ ಕೊಂದು ಬಿಡುವ ತಾಕತ್ತು ಹಂತಕನಲ್ಲಿ ಜಾಗೃತವಾಗೋದು ಯಾವಾಗ ಅನ್ನೋದು ಕೂಡ ಅಷ್ಟು ಸುಲಭವಾಗಿ ಹೇಳೋಕೆ ಬರೋದಿಲ್ಲ.
ಮೊನ್ನೆ ಮೊನ್ನೆ ಜೀ ಟಿವಿಯಲ್ಲಿ ಜೋಗಿ ಸಿನಿಮಾ ನೋಡಿದೆ. ಬಹುಶಃ ಈ ಸಿನಿಮಾವನ್ನು ನಾನು ನೋಡ್ತಾ ಇರೋದು ಹತ್ತನೇ ಬಾರಿ ಇರಬಹುದೋ ಏನೋ? ಸೆಂಟಿಮೆಂಟ್ಗಳಿಗೆ ತೀರಾ ಹೆಚ್ಚೇ ಎನ್ನುವಷ್ಟು ಬೆಲೆ ಕೊಡುವ ನನಗೆ ಈ ಸಿನಿಮಾ ತುಂಬಾನೇ ಇಷ್ಟ ಆಗಿತ್ತು. ಆದರೆ ಇಲ್ಲೂ ಮಚ್ಚು-ಲಾಂಗುಗಳ ಆರ್ಭಟ ನೋಡಿದಾಗ ಪಾತಕ ಲೋಕದ ಭಯಾನಕತೆಯ ಬಗ್ಗೆ ಸ್ವಲ್ಪ ಹೆಚ್ಚೇ ಎನ್ನುವಂತೆ ಯೋಚಿಸ್ತೇನೆ. ಹಿಂದೊಮ್ಮೆ ನನ್ನ ತೀರಾ ಹತ್ತಿರದ ಹಿತೈಷಿ ಎನ್ನಬಹುದಾದ ವ್ಯಕ್ತಿಯೊಬ್ಬರು ಅಗ್ನಿ ಶ್ರೀಧರ್ ಎಂಬ ಅಂಡರ್ವಲ್ಡರ್್ ಲೇಖಕನ `ಎದೆಗಾರಿಕೆ ಎಂಬ ಪುಸ್ತಕ ಕೊಟ್ಟಿದ್ರೂ. ಕ್ರೈಂ ಅಂದ್ರೇನೆ ಅಷ್ಟಕ್ಕಷ್ಟೇ ಅಂತಿದ್ದ ನಾನು ಅಂದು ಮಾತ್ರ ಒಂದೇ ಉಸಿರಿಗೆ ಆ ಪುಸ್ತಕ ಓದಿ ಮುಗಿಸಿದೆ. ಯಾಕೆಂದರೆ ಎಲ್ಲೂ ನಿಲ್ಲಿಸೋಕೆ ಅವಕಾಶವೇ ಕೊಡದ ಹಾಗೆ ಅಗ್ನಿ ತಮ್ಮ ಕೈ ಚಳಕವನ್ನು ಈ ಪುಸ್ತಕದ ಪ್ರತೀ ಪುಟದಲ್ಲೂ ತೋರಿಸಿದ್ದಾರೆ. ಮುಂದೆ ಈ ಪುಸ್ತಕ ಸಿನಿಮಾ ಆಗುತ್ತೆ ಅನ್ನೋ ಸುದ್ದಿ ಇದೆ. ಅದೇ ಲಾಸ್ಟ್........ಆನಂತರ ನಾನು ಪಾತಕ ಲೋಕದ ಮಿಸ್ಟರಿಯನ್ನು ಓದಲೇ ಇಲ್ಲ.....
ಪಕ್ಕಾ ಸೆಂಟಿಮೆಂಟಲ್ ಆದ ನಾನು ಓದುವ ಪುಸ್ತಕಗಳು ಕೂಡ ಹಾಗೆ ಇರುತ್ತೆ. ಅಷ್ಟೇ ಯಾಕೆ ನನ್ನ ಮೊಬೈಲ್ನಲ್ಲಿರೋ ಸಾಂಗ್, ನಾನಿಷ್ಟ ಪಡೋ ಫಿಲ್ಮ್ ಎಲ್ಲಾನೂ ಪಕ್ಕಾ ಎಮೋಷನಲ್. ಆದ್ರೆ ಕೆಲವೊಮ್ಮೆ ತೀರಾ ಧೀರ್ಘವಾಗಿ ಯೋಚನೆ ಮಾಡೋದು ಮಾತ್ರ ಕ್ರೈಂ ಘಟನೆಗಳ ಬಗ್ಗೆ. ಅದರಲ್ಲೂ ಕೊಲೆಗಾರನ ಮನಸ್ಥಿತಿಯ ಬಗ್ಗೆ........
ಮನುಷ್ಯ ಹುಟ್ಟೋವಾಗ ಅಳ್ತಾನೆ ಹುಟ್ತಾನೆ....ಹೋಗೋವಾಗ ಬೇರೆಯವರನ್ನು ಅಳಿಸ್ತಾ ಹೋಗ್ತಾನೆ. ಅದರ ಮಧ್ಯೆ ತಾನೂ ನಗ್ತಾ...ತನ್ನ ಸುತ್ತಲಿನವರನ್ನೂ ನಗಿಸ್ತಾ ಇದ್ರೆ ಅದೇ ಜೀವನ ಅನ್ನೋದು ನಾನು ಕಂಡು ಕೊಂಡ ಸತ್ಯ. ಆದರೆ ನಿರಂತರ ಕೊಲೆಗಳಲ್ಲೇ ಕಾಲ ಕಳೆಯುವವರಿಗೆ ನಗು ಅನ್ನೋದೆ ಗೊತ್ತಿಲ್ವಾ? ಇವರ ಮನಸ್ಥಿತಿ ಇಷ್ಟು ಕ್ರೂರವಾಗಲು ಕಾರಣವಾದರೂ ಏನಿರಬಹುದು? ಬಹುಶಃ ಇದೊಂದು ಉತ್ತರವಿಲ್ಲದ ಪ್ರಶ್ನೆ ಅನ್ನಬಹುದೇನೋ?
ಫ್ರೆಂಡ್ಸ್, ಇಷ್ಟೆಲ್ಲಾ ಹೇಳೋದಕ್ಕೂ ಕಾರಣ ಇದೆ....
ಒಮ್ಮೆ ಒಂಟಿಯಾಗಿ ಕೂತ್ಕೊಂಡು ಯೋಚಿಸಿ. ಆಗ ನಿಮಗೆ ಯಾರೂ ಕಾಣಿಸೋದಿಲ್ಲ. ನಿಮ್ಮ ಎಲ್ಲಾ ಪ್ರಶ್ನೆಗಳಿಗೂ ನೀವೊಬ್ಬರೇ ಉತ್ತರ ಆಗ್ತೀರಾ. ಅಲ್ಲದೇ ಜೀವನದ ಪ್ರತೀ ಹೆಜ್ಜೆಯನ್ನು ಟೈಮ್ ಟು ಟೈಮ್ ವಾಚ್ ಮಾಡುವವನು ಆ ದೇವರು ಒಬ್ಬನೇ. ಅದೂ ಕೂಡ ನಮ್ಮ ನಂಬಿಕೆಯಷ್ಟೇ. ಹೀಗಾದ್ರೂ ನಾವು ಜೀವನದಲ್ಲಿ ಒಂದಲ್ಲ ಒಂದು ತಪ್ಪು ಮಾಡೇ ಮಾಡ್ತೀವಿ.. ಕ್ಷಮಿಸಿ...ಒಂದಲ್ಲ ನೂರಾರು ತಪ್ಪುಗಳು......ನಾವೆಷ್ಟೇ ತಪ್ಪು ಮಾಡಬಾರದು ಅಂದ್ಕೊಂಡಿದ್ರೂ ತಪ್ಪು ಮಾಡೇ ಮಾಡ್ತೀವಿ...ನಮ್ಮ ಮನಸ್ಸಿಗೆ ವಿರುದ್ದವಾಗಿ ಹೋಗ್ತೀವಿ....ಕೆಲವರನ್ನು ವಿರೋಧಿಸ್ತೀವಿ....ಇನ್ನು ಕೆಲವರನ್ನ ಇಷ್ಟ ಪಡ್ತೀವಿ.......ಬಟ್ ಇದಕ್ಕೆಲ್ಲಾ ಫುಲ್ಸ್ಟಾಪ್ ಅನ್ನೋದು ಇಲ್ಲ ಎನ್ನುವುದು ನೆನಪಿರಲಿ.
ಜಸ್ಟ್ ಯೋಚನೆ ಮಾಡಿ...
 ನಮ್ಮ ಮನಸ್ಥಿತಿಗೆ ವಿರುದ್ದವಾಗಿ ನಾವ್ ಏನೆಲ್ಲಾ ಮಾಡಿಲ್ಲ ಅಂತ....
              ಕೆಲವೊಮ್ಮೆ ಎಲ್ಲವೂ ಅನಿವಾರ್ಯ....ಜಸ್ಟ್ ಯೋಚಿಸಿ
ಧ್ವನಿ